Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 10:14 - ಕನ್ನಡ ಸತ್ಯವೇದವು C.L. Bible (BSI)

14-15 ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14-15 ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14-15 “ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಿಯಾ ಬರೊ ಕುರ್‍ಬುರ್, ಕಶೆ ಬಾಬಾ ಮಾಕಾ ವಳಕ್ತಾ ಅನಿ ಮಿಯಾ ಬಾಬಾಕ್ ವಳಕ್ತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 10:14
23 ತಿಳಿವುಗಳ ಹೋಲಿಕೆ  

ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.


ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.


“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II


ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.


ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.


ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.


ಅವನು ಕೇವಲ ಕೂಲಿಯಾಳು; ಕುರಿಗಳ‍ ಚಿಂತೆ ಅವನಿಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು