Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:41 - ಕನ್ನಡ ಸತ್ಯವೇದವು C.L. Bible (BSI)

41 ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ , ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆಗ ಕಲ್ಲನ್ನು ತೆಗೆದುಹಾಕಿದರು. ಮತ್ತು ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ - ತಂದೆಯೇ, ನೀನು ನನ್ನ ಪ್ರಾರ್ಥನೆಯನ್ನು ಕೇಳಿದ್ದಕ್ಕೆ ನಿನ್ನನ್ನು ಕೊಂಡಾಡುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದುಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆನಿ ತೊ ಗುಂಡೊ ಕಡೆಕ್ ಕಾಡ್ಲ್ಯಾನಿ. ತನ್ನಾ ಜೆಜುನ್ ವೈರ್ ಬಗಟ್ಲ್ಯಾನ್ ಅನಿ, “ಬಾಬಾ ಮಿಯಾ ತುಕಾ ಧನ್ಯವಾದ್ ದಿತಾ ಕಶ್ಯಾಕ್ ಮಟ್ಲ್ಯಾರ್ ತಿಯಾ ಮಾಜೆ ಆಯಿಕ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:41
14 ತಿಳಿವುಗಳ ಹೋಲಿಕೆ  

ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.


ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II


ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.


ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.


ಜೋಸೆಫನು ನಾರುಮಡಿ ವಸ್ತ್ರವನ್ನು ಕೊಂಡುಕೊಂಡು ಬಂದು, ಯೇಸುವನ್ನು ಶಿಲುಬೆಯಿಂದ ಇಳಿಸಿ, ಆ ವಸ್ತ್ರದಿಂದ ಸುತ್ತಿದನು. ಅನಂತರ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಅದನ್ನಿರಿಸಿ, ಸಮಾಧಿಯ ದ್ವಾರಕ್ಕೆ ದೊಡ್ಡ ಕಲ್ಲನ್ನು ಉರುಳಿಸಿ ಮುಚ್ಚಿದನು.


ಸಮಾಧಿಯ ದ್ವಾರಕ್ಕೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿ ಬಿದ್ದಿತ್ತು.


ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ,” ಎಂದಳು.


ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.


ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು