Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 11:48 - ಕನ್ನಡ ಸತ್ಯವೇದವು C.L. Bible (BSI)

48 ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಅವನನ್ನು ನಂಬಾರು; ಮತ್ತು ರೋಮ್ ರಾಜ್ಯದವರು ಬಂದು ನಮ್ಮ ಸ್ಥಾನವನ್ನೂ ಜನವನ್ನೂ ಸೆಳಕೊಂಡಾರು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಅಮಿ ಹೆಕಾ ಅಶಿಚ್ ಫಿಡೆ ಜಾವ್ಕ್ ಸೊಡುನ್ ದಿಲ್ಯಾರ್, ಸಗ್ಳಿ ಲೊಕಾ ಹೆಚೆವರ್ತಿ ವಿಶ್ವಾಸ್ ಕರ್‍ತಾತ್, ಅನಿ ರೊಮಾಚೆ ಅದಿಕಾರಿ ಯೆವ್ನ್ ಅಮ್ಚ್ಯಾ ದೆವಾಚಿ ಗುಡಿ ಅನಿ ಅಮ್ಚೊ ದೆಶ್ ನಾಸ್ ಕರುನ್ ಟಾಕ್ತಿಲ್!” ಮಟ್ಲ್ಯಾನಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 11:48
19 ತಿಳಿವುಗಳ ಹೋಲಿಕೆ  

“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.


ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು. ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ.


ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.


ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.


ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.


ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.


“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು