Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:1 - ಕನ್ನಡ ಸತ್ಯವೇದವು C.L. Bible (BSI)

1 ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಸ್ಕಹಬ್ಬವು ಇನ್ನು ಆರು ದಿವಸ ಮುಂದೆ ಇರಲಾಗಿ ಯೇಸು ಬೇಥಾನ್ಯಕ್ಕೆ ಬಂದನು. ಯೇಸುವು ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಸ್ಕಾಚೆ ಸನಾಕ್ ಸಾ ದಿಸ್ ಹೊತ್ತೆ, ತನ್ನಾ ಜೆಜು ಭೆಥನಿ ಮನ್ತಲ್ಯಾ ಗಾಂವಾತ್, ಅಪ್ನಿ ಝಿತ್ತೊ ಕರುನ್ ಉಟ್ವಲ್ಲ್ಯಾ ಲಾಜರಾಚ್ಯಾ ಘರಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:1
13 ತಿಳಿವುಗಳ ಹೋಲಿಕೆ  

ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.


ಆರಾಧನೆಗೆಂದು ಹಬ್ಬಕ್ಕೆ ಬಂದಿದ್ದವರಲ್ಲಿ ಕೆಲವರು ಗ್ರೀಕರು.


ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು.


ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (


ಅನಂತರ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟರು. ಬೆಥಾನಿಯಕ್ಕೆ ಬಂದು ರಾತ್ರಿಯನ್ನು ಅಲ್ಲೇ ಕಳೆದರು.


ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.


ಯೇಸು ಜೆರುಸಲೇಮನ್ನು ಸೇರಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನೂ ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು.


ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ಯೇಸು ಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡ ಗುಂಪು ಬಂದಿತು. ಯೇಸುವನ್ನು ಮಾತ್ರವಲ್ಲ, ಅವರು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಲಾಸರನನ್ನೂ ಕಾಣಲು ಆ ಜನರು ಅಲ್ಲಿಗೆ ಬಂದಿದ್ದರು.


ಮಾರನೆಯ ದಿನ ಯೇಸು ಸ್ವಾಮಿ ಜೆರುಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಹರಡಿತು.ಹಬ್ಬಕ್ಕೆ ಬಂದು ನೆರೆದಿದ್ದ ಜನಸಮೂಹಕ್ಕೆ ಈ ಸುದ್ದಿ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು