Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:13 - ಕನ್ನಡ ಸತ್ಯವೇದವು C.L. Bible (BSI)

13 ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ ! ಇಸ್ರಯೇಲಿನ ಅರಸನಿಗೆ ಶುಭವಾಗಲಿ !’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, “ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು - ಜಯ, ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಆಶೀರ್ವಾದ ಎಂದು ಆರ್ಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಸೆಮನುನ್ ತ್ಯಾನಿ ಖಜುರಾಚ್ಯಾ ಪಾನಾ ಸರ್ಕಿ ಪಾನಾ ಘೆವ್ನ್, “ಹೊಸಾನ್ನಾ! ಸರ್ವೆಸ್ವರಾಚ್ಯಾ ನಾವಾನ್ ಯೆತಾ ತೊ ದೆವ್ ಆಶಿರ್ವಾದ್ ದಿವ್ನ್ ದಿ! ದೆವಾ ಇಸ್ರಾಯೆಲಾಚೊ ರಾಜಾ ಆಶಿರ್ವಾದ್ ದಿವ್ನ್ ದಿ!” ಮನುನ್ ಬೊಬ್ ಮಾರುನ್ಗೆತ್ ಜೆಜುಕ್ ಭೆಟುಕ್ ಮನುನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:13
19 ತಿಳಿವುಗಳ ಹೋಲಿಕೆ  

ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.


ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.


ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.


ಇದನ್ನು ಕುರಿತೇ, ‘ಸಿಯೋನ್ ನಗರಿಯೇ, ಅಂಜಬೇಡ. ಇಗೋ ನೋಡು; ಹೇಸರಗತ್ತೆಯನ್ನೇರಿ ಬರುತ್ತಿರುವನು ನಿನ್ನ ಅರಸನು’ ಎಂದಿದೆ ಪವಿತ್ರಗ್ರಂಥ.


“ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.


ಯೇಸು ದಾರಿಯಲ್ಲಿದ್ದ ಪ್ರಾಯದ ಹೇಸರಗತ್ತೆಯೊಂದನ್ನು ಹತ್ತಿಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು