Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:20 - ಕನ್ನಡ ಸತ್ಯವೇದವು C.L. Bible (BSI)

20 ಆರಾಧನೆಗೆಂದು ಹಬ್ಬಕ್ಕೆ ಬಂದಿದ್ದವರಲ್ಲಿ ಕೆಲವರು ಗ್ರೀಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ದೇವಾರಾಧನೆ ಮಾಡಬೇಕೆಂದು ಜಾತ್ರೆಗೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸನಾಚ್ಯಾ ಎಳಾರ್ ಆರಾದನ್ ಕರುಕ್ ಮನುನ್ ಜೆರುಜಲೆಮಾಕ್ ಯೆಲ್ಲ್ಯಾ ಲೊಕಾತ್ನಿ ಉಲ್ಲಿ ಗ್ರಿಕ್ ದೆಶಾಚಿ ಲೊಕಾಬಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:20
19 ತಿಳಿವುಗಳ ಹೋಲಿಕೆ  

ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?


ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು.


ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.


ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.


“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.


ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.


ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.


ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ !” ಎಂದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು