Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:23 - ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ಯೇಸು ಅವರಿಗೆ, “ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಯೇಸು ಅವರಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ - ಮನುಷ್ಯಕುಮಾರನು ತನ್ನ ಮಹಿಮೆಯ ಪದವಿಯನ್ನು ಹೊಂದುವ ಸಮಯ ಬಂದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸು ಅವರಿಗೆ, “ಮನುಷ್ಯಕುಮಾರನು ತನ್ನ ಮಹಿಮೆಯನ್ನು ಹೊಂದುವ ಸಮಯ ಇದೇ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುನ್ ತೆಂಕಾ ಜವಾಬ್ ದಿಲ್ಲ್ಯಾನ್, “ಮಾನ್ಸಾಚೊ ಲೆಕ್ ಮೊಟಿ ಮಹಿಮಾ ಜೊಡುನ್ ಘೆತಲೊ ಎಳ್ ಅತ್ತಾ ಯೆವ್ನ್ ಪಾವ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:23
16 ತಿಳಿವುಗಳ ಹೋಲಿಕೆ  

ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.


ಯೇಸು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಿರುವಿರಾ? ಸಾಕು, ಸಮಯವು ಸಮೀಪಿಸಿತು;


“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.


ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.


ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.


ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.


ಅನಂತರ ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲಕ್ಕೆ ಕುಸಿದು, ಪ್ರಾರ್ಥಿಸುತ್ತಾ, “ಸಾಧ್ಯವಾದರೆ, ಈ ವಿಷಮ ಗಳಿಗೆಯು ನನ್ನಿಂದ ದೂರವಾಗಲಿ,” ಎಂದು ದೇವರನ್ನು ಬಿನ್ನವಿಸಿದರು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು