Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:35 - ಕನ್ನಡ ಸತ್ಯವೇದವು C.L. Bible (BSI)

35 ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಯೇಸು ಅವರಿಗೆ - ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ; ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ನಿಮಗೆ ಇರುವಾಗಲೇ ಸಂಚಾರಮಾಡಿರಿ. ಕತ್ತಲೆಯಲ್ಲಿ ಸಂಚಾರಮಾಡುವವನಿಗೆ ತಾನು ಎಲ್ಲಿ ಹೋಗುತ್ತೇನೆಂದು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಜೆಜುನ್, “ಅನಿ ಉಲ್ಲೊಸೊಚ್ ಎಳ್ ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾ, ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾನಾಚ್ ತುಮಿ ತುಮ್ಚಿ ಫಿಡ್ಲಿ ವಾಟ್ ಚಲಾ, ಅಶೆಚ್ ಕಾಳೊಕಾಕ್ ತುಮ್ಚ್ಯಾವರ್ತಿ ಯೆವ್ಕ್ ಹೊಯ್ನಾ ಕಾಳ್ಕಾತ್ ಚಲ್ತಲ್ಯಾಕ್ ತೊ ಖೈ ಜಾವ್ಕ್ ಲಾಗ್ಲಾ ಮನುನ್ ಗೊತ್ತ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:35
27 ತಿಳಿವುಗಳ ಹೋಲಿಕೆ  

ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.


“ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ,” ಎಂದರು ಯೇಸು ಸ್ವಾಮಿ.


ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ಆದರೆ ರಾತ್ರಿಯಲ್ಲಿ ನಡೆಯುವವನು ಎಡವಿಬೀಳುತ್ತಾನೆ. ಕಾರಣ, ಅವನಲ್ಲಿ ಬೆಳಕು ಇಲ್ಲ,” ಎಂದರು.


ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.


ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”


ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


“ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು