Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:38 - ಕನ್ನಡ ಸತ್ಯವೇದವು C.L. Bible (BSI)

38 ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇದರಿಂದ ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು; ಅದೇನಂದರೆ - ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಬಾಹುವು ಯಾರಿಗೆ ಗೋಚರವಾಯಿತು? ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಶೆ ತೆಂಕಾ ಇಸಾಯಿಯಾ ಪ್ರವಾದ್ಯಾನ್ “ಸರ್ವೆಸ್ವರಾ, ಮಿಯಾ ಸಾಂಗಲ್ಲ್ಯಾ ಖಬ್ರೆ ವರ್ತಿ ಕೊನ್ ವಿಶ್ವಾಸ್ ಕರ್‍ತಾ? ಸರ್ವೆಸ್ವರ್ ಅಪ್ನಾಚಿ ತಾಕತ್ ಕೊನಾಚ್ಯಾ ವರ್ತಿ ದಾಕುನ್ ದಿತಾ” ಮನುನ್ ಸಾಂಗಲ್ಲೆ ಪುರಾ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:38
24 ತಿಳಿವುಗಳ ಹೋಲಿಕೆ  

ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”


ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.


ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.


ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -


ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?


ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.


ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಅವರ ಉಡುಪಿಗಾಗಿ ಸೈನಿಕರು ಚೀಟುಹಾಕಿ ತಮ್ಮತಮ್ಮೊಳಗೇ ಹಂಚಿಕೊಂಡರು.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಜನರು ವಿಶ್ವಾಸಿಸದೆ ಹೋದುದಕ್ಕೆ ಯೆಶಾಯನು ಮತ್ತೊಂದು ವಚನದಲ್ಲಿ ಕಾರಣವನ್ನು ಸೂಚಿಸಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು