Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:40 - ಕನ್ನಡ ಸತ್ಯವೇದವು C.L. Bible (BSI)

40 “ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 “ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ, ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 “ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 “ದೆವಾನ್ ತುಮ್ಚೆ ಡೊಳೆ ಕುಡ್ಡೆ ಕರ್‍ಲ್ಯಾನಾಯ್ ಅನಿ ತೆಂಚಿ ಮನಾಂಚಿ ದಾರಾ ಧಾಪ್ಲ್ಯಾನಾಯ್” “ತಸೆಮನುನ್ ತೆಂಚ್ಯಾ ಡೊಳ್ಯಾಕ್ನಿ ದಿಸಿನಾ ಅನಿ ತೆಂಚ್ಯಾ ಮನಾಕ್ನಿ ಕಾಯ್ ಬಿ ಅರ್ತ್ ಹೊಯ್ನಾ ಅನಿ ಮಿಯಾ ತೆಂಕಾ ಗುನ್ ಕರುಕ್ ಮನುನ್ ತೆನಿ ಮಾಜಾಕ್ಡೆ ಪರ್ತುನ್ ಯೆಯ್ನಾತ್ ಮನುನ್ ದೆವ್ ಮನ್ತಾ.” ಮನುನ್ ಬಿ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:40
44 ತಿಳಿವುಗಳ ಹೋಲಿಕೆ  

ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.


“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ


ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ಸರ್ವೇಶ್ವರ : “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ನಾನಂತು, “ಪ್ರಭೂ ಕರುಣಿಸು, ಗುಣಪಡಿಸೆನ್ನನು I ನಿನಗೆ ವಿರುದ್ಧ ಪಾಪಗೈದೆ” ಎಂದು ಬೇಡುವೆನು II


ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II


ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.


‘ನೀನು ಆ ಜನರ ಬಳಿಗೆ ಹೋಗಿ ಅವರಿಗೆ ಇಂತೆನ್ನು: ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರೀ ಜನರು


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು


ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.


ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.


ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.


ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.


ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.


ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;


ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.


ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಜನರು ವಿಶ್ವಾಸಿಸದೆ ಹೋದುದಕ್ಕೆ ಯೆಶಾಯನು ಮತ್ತೊಂದು ವಚನದಲ್ಲಿ ಕಾರಣವನ್ನು ಸೂಚಿಸಿದ್ದಾನೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು