Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:43 - ಕನ್ನಡ ಸತ್ಯವೇದವು C.L. Bible (BSI)

43 ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಯಾಕಂದರೆ ದೇವರಿಂದ ಬರುವ ಮಾನಕ್ಕಿಂತ ಮನುಷ್ಯರಿಂದ ಬರುವ ಮಾನವೇ ಅವರಿಗೆ ಇಷ್ಟವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಈ ಜನರು ದೇವರ ಹೊಗಳಿಕೆಗಿಂತಲೂ ಜನರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ತೆನಿ ದೆವಾಚ್ಯಾ ಶಾಬಾಸ್ಕಿನ್ಬಿ ಜಾಸ್ತಿ ಮಾನ್ಸಾಚ್ಯಾ ಶಾಬಾಸ್ಕಿಕ್ ಪ್ರೆಮ್ ಕರ್‍ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:43
20 ತಿಳಿವುಗಳ ಹೋಲಿಕೆ  

ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


“ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.


ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.


ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.


ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು.


ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.


ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.


ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.


ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು