Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 12:44 - ಕನ್ನಡ ಸತ್ಯವೇದವು C.L. Bible (BSI)

44 ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಯೇಸು ಕೂಗಿ ಹೇಳಿದ ಮಾತು ಏನಂದರೆ - ನನ್ನನ್ನು ನಂಬಿದವನು ನನ್ನನ್ನೇ ನಂಬುವವನಲ್ಲ; ನನ್ನನ್ನು ಕಳುಹಿಸಿಕೊಟ್ಟಾತನನ್ನು ನಂಬುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಬಳಿಕ ಯೇಸು ಗಟ್ಟಿಯಾಗಿ ಹೀಗೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಜೆಜುನ್ ಮೊಟ್ಯಾ ಅವಾಜಾನ್ ಸಾಂಗಲ್ಲ್ಯಾನ್ “ಜೊ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾ ತೊ ಖಾಲಿ ಮಾಜೆವರ್ತಿ ಎವ್ಡೆಚ್ ನ್ಹಯ್ ಮಾಕಾ ಧಾಡುನ್ ದಿಲ್ಲ್ಯಾಚ್ಯಾ ವರ್‍ತಿಬಿ ವಿಶ್ವಾಸ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 12:44
11 ತಿಳಿವುಗಳ ಹೋಲಿಕೆ  

“ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!


ಜ್ಞಾನವೆಂಬಾಕೆ ಹಾದಿಗಳಲ್ಲಿ ಕೂಗುತ್ತಾ ಇದ್ದಾಳೆ; ಬೀದಿಚೌಕಗಳಲ್ಲಿ ದನಿಗೈಯುತ್ತಾ ಇದ್ದಾಳೆ;


ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು