Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:21 - ಕನ್ನಡ ಸತ್ಯವೇದವು C.L. Bible (BSI)

21 ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದನ್ನು ಹೇಳುತ್ತಾ ಯೇಸು ಆತ್ಮದಲ್ಲಿ ನೊಂದುಕೊಂಡವನಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ; ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದು ಕೊಡುತ್ತಾನೆ” ಎಂದು ಸಾಕ್ಷಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದನ್ನು ಹೇಳಿ ಯೇಸು ಆತ್ಮದಲ್ಲಿ ತತ್ತರಗೊಂಡು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನೆಂದು ಸ್ಪಷ್ಟವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಆತ್ಮದಲ್ಲಿ ತತ್ತರಗೊಂಡು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು” ಎಂದು ಬಹಿರಂಗವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಹೆ ಸಗ್ಳೆ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ದುಕಾನಿ ಭರಲ್ಲೊ ತನ್ನಾ ತೆನಿ “ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ತುಮ್ಚ್ಯಾತ್ಲೊ ಎಕ್ಲೊ ಮಾಕಾ ಘಾತ್‍ ಕರುನ್ ಧರುನ್ ದಿನಾರ್ ಹಾಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:21
17 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸುಸ್ವಾಮಿ, “ನನ್ನ ಸಂಗಡ ಊಟಮಾಡುವ ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುವನು, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿಬಂದಿತು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).


ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.


ಯೇಸು ಕಣ್ಣೀರಿಟ್ಟರು.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.


ಯೇಸು ಯಾರನ್ನು ಕುರಿತು ಹಾಗೆಂದರೆಂದು ತಿಳಿಯದೆ ಶಿಷ್ಯರು ಒಬ್ಬರನ್ನೊಬ್ಬರು ಸಂಶಯದಿಂದ ನೋಡುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು