Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:23 - ಕನ್ನಡ ಸತ್ಯವೇದವು C.L. Bible (BSI)

23 ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬ ಶಿಷ್ಯನು ಆತನ ಎದೆಗೆ ಒರಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಶಿಷ್ಯರೊಳಗೆ ಯೇಸುವಿಗೆ ಪ್ರಿಯನಾಗಿದ್ದ ಒಬ್ಬನು ಆತನ ಎದೆಯ ಹತ್ತರ ಒರಗಿಕೊಂಡಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಶಿಷ್ಯರಲ್ಲಿ ಒಬ್ಬನು ಯೇಸುವಿನ ಸಮೀಪದಲ್ಲಿ ಒರಗಿಕೊಂಡಿದ್ದನು. ಯೇಸು ಪ್ರೀತಿಸುತ್ತಿದ್ದ ಶಿಷ್ಯನೇ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಶಿಸಾನಿತ್ಲೊ ಎಕ್ಲೊ, ಜೆಜುಚ್ಯಾ ಪ್ರೆಮಾಚೊ ಶಿಸ್ ಜೆಜುಕ್ ಲಾಗುನ್ ಬಸಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:23
15 ತಿಳಿವುಗಳ ಹೋಲಿಕೆ  

ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.


ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)


ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು.


ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.


ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು.


ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.


ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.


ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡು ತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೆ ಮಗುವಿನಂತೆ ಅವನ ಸಂಗಡ ಹಾಗೂ ಅವನ ಮಕ್ಕಳ ಸಂಗಡವೆ ಬೆಳೆಯುತ್ತಿತ್ತು. ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆಮಾಡುತ್ತಿತ್ತು.


ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.


ಆಗ ಆ ಶಿಷ್ಯನು, ಯೇಸುವಿನ ಮಗ್ಗುಲಿಗೆ ಸರಿದು, “ಅಂಥವನು ಯಾರು ಪ್ರಭೂ?’ ಎಂದು ಕೇಳಿದನು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.


ಸಿಮೋನಪೇತ್ರನು, “ಯಾರನ್ನು ಕುರಿತು ಹಾಗೆ ಹೇಳುತ್ತಿದ್ದಾರೆಂದು ಕೇಳು,” ಎಂದು ಸನ್ನೆಮಾಡಿದನು.


ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು