Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 13:5 - ಕನ್ನಡ ಸತ್ಯವೇದವು C.L. Bible (BSI)

5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅನಂತರ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುತ್ತಾ, ತಾನು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರಸುವುದಕ್ಕೂ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ನಡುವಿಗೆ ಕಟ್ಟಿಕೊಂಡಿದ್ದ ಕೈಪಾವುಡದಿಂದ ಒರಸುವದಕ್ಕೂ ಪ್ರಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ಶಿಷ್ಯರ ಕಾಲುಗಳನ್ನು ತೊಳೆದು ತಾನು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಅವರ ಪಾದಗಳನ್ನು ಒರಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅನಂತರ ಅವರು ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುವುದಕ್ಕೂ ತಾವು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರೆಸುವುದಕ್ಕೂ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಮಾನಾ ಎಕ್ ಮೊಟ್ಯಾ ಅಯ್ದಾನಾತ್ ಪಾನಿ ವೊತುನ್ ಭರುನ್ ಘೆಟ್ಲ್ಯಾನ್. ಅನಿ ಅಪ್ನಾಚ್ಯಾ ಶಿಸಾಂಚೆ ಪಾಂಯೆ ಧುವ್ಕ್ ಚಾಲು ಕರ್ಲ್ಯಾನ್, ಅನಿ ಅಪ್ನಾಚ್ಯಾ ಕಂಬ್ರೆಕ್ ಭಾಂದುನ್ ಘೆಟಲ್ಲ್ಯಾ ಟಿವಾಲಾನಿ ತೆಂಚೆ ಪಾಂಯೆ ಪುಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 13:5
30 ತಿಳಿವುಗಳ ಹೋಲಿಕೆ  

ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.


ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.


ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.


ಆಕೆ ಎದ್ದು ನಮಸ್ಕಾರ ಮಾಡಿ, ಮಾತಾಡಿಸಿದವನಿಗೆ, “ನಿನ್ನ ದಾಸಿಯಾದ ನಾನು ನನ್ನ ಒಡೆಯರ ಕೈಕೆಳಗಿರುವ ಸೇವಕರ ಪಾದ ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದು ಉತ್ತರಕೊಟ್ಟಳು.


ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.


ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.


ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.


ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.


ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.


ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.


“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.


ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು.


ಈ ಬೀದಿಯಲ್ಲಿ ರಾತ್ರಿಯನ್ನು ಕಳೆಯಬೇಡ; ನನ್ನ ಮನೆಗೆ ಬಾ,” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವುಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.


ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, “ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು