Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:10 - ಕನ್ನಡ ಸತ್ಯವೇದವು C.L. Bible (BSI)

10 ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾನು ತಂದೆಯಲ್ಲಿದ್ದೇನೆ, ತಂದೆಯು ನನ್ನಲ್ಲಿ ಇದ್ದಾನೆ ಎಂದು ನೀನು ನಂಬುವದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕ್ರಿಯೆಗಳನ್ನು ನಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾರೆ ಎಂದು ನೀನು ನಂಬುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವುದಿಲ್ಲ; ನನ್ನಲ್ಲಿರುವ ತಂದೆಯೇ ತಮ್ಮ ಕ್ರಿಯೆಗಳನ್ನು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಫಿಲಿಪಾ, ಮಿಯಾ ಬಾಬಾಚ್ಯಾ ಭುತ್ತುರ್ ಅನಿ ಬಾಬಾ ಮಾಜ್ಯಾ ಭುತ್ತುರ್ ಹಾಯ್ ಮನುನ್ ತುಕಾ ವಿಶ್ವಾಸ್ ನಾ ಕಾಯ್? ಮಟ್ಲ್ಯಾನ್. ಮಾನಾ ಜೆಜುನ್ ಶಿಸಾಕ್ನಿ, ಮಿಯಾ ತುಮ್ಚ್ಯಾಕ್ಡೆ ಬೊಲಲ್ಲ್ಯಾ ಗೊಸ್ಟಿಯಾ ಮಾಜ್ಯಾ ಭುತ್ತುರ್‍ನಾಚ್ ಯೆವ್ಕನಾತ್, ಮಾಜ್ಯಾ ಭುತ್ತುರ್ ಹೊತ್ತೊ ಮಾಜೊ ಬಾಬಾ ಸ್ವತಾ ಅಪ್ನಾಚೆ ಕಾಮ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:10
26 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು.


ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ಆಗ ಯೇಸು ಸ್ವಾಮಿ, “ನಾನು ಮಾಡುವ ಬೋಧನೆ ನನ್ನದಲ್ಲ; ನನ್ನನ್ನು ಕಳುಹಿಸಿದಾತನದು.


ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ದೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ.


ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ.


ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು