Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:12 - ಕನ್ನಡ ಸತ್ಯವೇದವು C.L. Bible (BSI)

12 ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವನು ನಾನು ನಡಿಸುವ ಕ್ರಿಯೆಗಳನ್ನು ತಾನೂ ನಡಿಸುವನು; ಮತ್ತು ಅವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ನಡಿಸುವನು. ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಿಯಾ ತುಮ್ಕಾ ಖರೆ ಹೊತ್ತೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಾಜೆ ವರ್ತಿ ವಿಶ್ವಾಸ್ ಕರ್‍ತಾತ್ ತೆನಿ ಮಿಯಾ ಕರಲ್ಲಿ ಕಾಮಾ ಕರ್‍ತಾತ್, ತೆನಿ ತ್ಯೆಚೆನ್ಬಿ ಮೊಟಿ ಕಾಮಾ ಕರ್‍ತಾತ್, ಕಶ್ಯಾಕ್ ಮಟ್ಲ್ಯಾರ್ ಮಿಯಾ ಬಾಬಾಕ್ಡೆ ಜಾವ್ಕ್ ಲಾಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:12
28 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.


ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು;


ಹೀಗೆ ದಿನೇ ದಿನೇ ಮಾಡುತ್ತಿದ್ದಳು. ಇದರಿಂದ ಪೌಲನಿಗೆ ಬಹಳ ಬೇಸರವಾಯಿತು. ಅವಳ ಕಡೆಗೆ ತಿರುಗಿ, ಅವಳನ್ನು ಹಿಡಿದಿದ್ದ ದೆವ್ವಕ್ಕೆ, “ಇವಳನ್ನು ಬಿಟ್ಟು ತೊಲಗು ಎಂದು ಯೇಸುಕ್ರಿಸ್ತರ ನಾಮದಲ್ಲಿ ನಿನಗೆ ಆಜ್ಞಾಪಿಸುತ್ತೇನೆ,” ಎಂದನು. ಆ ಕ್ಷಣವೇ ಅದು ಅವಳನ್ನು ಬಿಟ್ಟುಹೋಯಿತು.


ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.


ಅವನು ಬಳಸಿದ ಕರವಸ್ತ್ರಗಳನ್ನೂ ಉಡುವಸ್ತ್ರಗಳನ್ನೂ ಜನರು ತೆಗೆದುಕೊಂಡು ಹೋಗಿ ವ್ಯಾಧಿಸ್ಥರಿಗೆ ಮುಟ್ಟಿಸಿದ್ದೇ, ಅವರ ವ್ಯಾಧಿಗಳು ಗುಣವಾಗುತ್ತಿದ್ದವು; ದೆವ್ವಗಳು ಬಿಟ್ಟುಹೋಗುತ್ತಿದ್ದವು.


ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.


ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.


ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.


ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.


ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.


“ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದುಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ.


ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.


ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹುಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು.


ದೂರದಲ್ಲಿ ಎಲೆ ತುಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೇನಾದರೂ ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಿಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.


ಬಿತ್ತುವವನೊಬ್ಬ, ಕೊಯ್ಯುವವನಿನ್ನೊಬ್ಬ,’ ಎಂಬ ನಾಣ್ನುಡಿ ನಿಜವಾದುದು.


ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು