Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:17 - ಕನ್ನಡ ಸತ್ಯವೇದವು C.L. Bible (BSI)

17 ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ತೊ ಎಕ್ ಆತ್ಮೊ ತೊ ದೆವಾಚ್ಯಾ ವಿಶಯಾತ್ ಖರೆ ದಾಕ್ವುನ್ ದಿತಾ. ಹ್ಯೊ ಜಗ್ ತೆಕಾ ಸ್ವಿಕಾರ್ ಕರಿನಾ, ಕಶ್ಯಾಕ್ ಮಟ್ಲ್ಯಾರ್ ಹ್ಯೊ ಜಗ್ ತೆಕಾ ವಳ್ಕಿನಾ, ತೊ ತೆಕಾ ದಿಸಿನಾ. ಖರೆ ತುಮಿ ತೆಕಾ ವಳಕ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತೊ ತುಮ್ಚ್ಯಾ ವಾಂಗ್ಡಾ ಜಿವನ್ ಕರ್‍ತಾ ಅನಿ ತುಮ್ಚ್ಯಾ ಭುತ್ತುರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:17
30 ತಿಳಿವುಗಳ ಹೋಲಿಕೆ  

ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.


ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.


ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.


ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು : ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.


ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.


ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.


ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.


ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”


ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು