Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 14:6 - ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೇಸು ಅವನಿಗೆ, “ನಾನೇ ಮಾರ್ಗವೂ, ಸತ್ಯವೂ ಮತ್ತು ಜೀವವೂ ಆಗಿದ್ದೇನೆ. ನನ್ನ ಮೂಲಕವಲ್ಲದೆ ಯಾರೂ ತಂದೆಯ ಬಳಿಗೆ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜೆಜುನ್ ತೆಕಾ “ಮಿಯಾಚ್ ವಾಟ್, ಖರೆ, ಅನಿ ಜಿವ್, ಮಾಜೆಕ್ನಾ ಹೊವ್ನ್ ಗೆಲ್ಯಾ ಶಿವಾಯ್ ಕೊನಾಕ್ಬಿ ಬಾಬಾಕ್ಡೆ ಯೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 14:6
57 ತಿಳಿವುಗಳ ಹೋಲಿಕೆ  

ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”


ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.


ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.


ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.


ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.


ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.


ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು :


ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು