Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:18 - ಕನ್ನಡ ಸತ್ಯವೇದವು C.L. Bible (BSI)

18 “ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಈ ಲೋಕವು ನಿಮ್ಮನ್ನು ದ್ವೇಷ ಮಾಡಿದರೆ, ಅದು ಮೊದಲು ನನ್ನನ್ನೇ ದ್ವೇಷ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯಾ ಜಗಾನ್ ತುಮ್ಚೊ ದ್ವೆಸ್ ಕರ್ಲ್ಯಾರ್ ತೆನಿ ತುಮ್ಚ್ಯಾನ್ಕಿ ಅದ್ದಿ ತೆನಿ ಮಾಜೊ ದ್ವೆಸ್ ಕರ್‍ಲಾ ಮನುನ್ ಯಾದ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:18
22 ತಿಳಿವುಗಳ ಹೋಲಿಕೆ  

ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.


ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.


ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.


ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.


ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು : “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”


ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.


ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.


ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು ! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು !


“ನಿಮ್ಮ ವಿಶ್ವಾಸ ಕುಸಿಯದಂತೆ ನೀವು ಎಚ್ಚರಿಕೆ ವಹಿಸಬೇಕೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು