Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 15:8 - ಕನ್ನಡ ಸತ್ಯವೇದವು C.L. Bible (BSI)

8 ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀವು ಬಹಳ ಫಲಕೊಡುವುದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವುದು ಮತ್ತು ನೀವು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನೀವು ಬಹಳ ಫಲಕೊಡುವದರಿಂದಲೇ ನನ್ನ ತಂದೆಗೆ ಮಹಿಮೆ ಉಂಟಾಗುವದು; ಮತ್ತು ನನ್ನ ಶಿಷ್ಯರಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀವು ಬಹಳ ಫಲಕೊಟ್ಟು, ನೀವೇ ನನ್ನ ಶಿಷ್ಯರೆಂಬುದನ್ನು ತೋರಿಸಬೇಕು. ಇದರಿಂದ ನನ್ನ ತಂದೆಗೆ ಮಹಿಮೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತುಮಿ ಜಾಸ್ತಿಚಿ ಫಳಾ ದಿಲ್ಲ್ಯಾ ವೈನಾ ಮಾಜ್ಯಾ ಬಾಬಾಚಿ ಮಹಿಮಾ ದಾಕ್ವುನ್ ದಿಲ್ಯಾಶಿ, ಅನಿ ಅಶೆಚ್ ತುಮಿ ಮಾಜಿ ಶಿಸಾ ಹೊಲ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 15:8
19 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”


ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.


“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.


ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.


ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು