Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 16:16 - ಕನ್ನಡ ಸತ್ಯವೇದವು C.L. Bible (BSI)

16 “ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ,” ಎಂದರು ಯೇಸು ಸ್ವಾಮಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನು ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ನೋಡುವಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಸ್ವಲ್ಪಕಾಲವಾದ ಮೇಲೆ ನಾನು ನಿಮಗೆ ಕಾಣುವದಿಲ್ಲ; ಅನಂತರ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಸ್ವಲ್ಪಕಾಲವಾದ ಬಳಿಕ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ಮತ್ತೆ ನೋಡುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 “ಅನಿ ಎಕ್ ಉಲ್ಲ್ಯಾ ಎಳಾಚ್ಯಾ ಮಾನಾ ಮಿಯಾ ತುಮ್ಕಾ ಬಗುಕ್ ಗಾವಿನಾ ಮಾನಾ ಅನಿ ಉಲ್ಲ್ಯಾ ಎಳಾನ್ ಮಿಯಾ ತುಮ್ಕಾ ಬಗುಕ್ ಗಾವ್ತಾ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 16:16
19 ತಿಳಿವುಗಳ ಹೋಲಿಕೆ  

ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.


ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.


ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ


ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.


ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು