Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:6 - ಕನ್ನಡ ಸತ್ಯವೇದವು C.L. Bible (BSI)

6 “ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಲೋಕದಲ್ಲಿ ನೀನು ನನಗೆ ಕೊಟ್ಟಿರುವ ಮನುಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿನ್ನವರಾಗಿದ್ದರು ಮತ್ತು ನೀನು ಇವರನ್ನು ನನಗೆ ಕೊಟ್ಟಿದ್ದೀ. ಇವರು ನಿನ್ನ ವಾಕ್ಯಕ್ಕೆ ವಿಧೇಯರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಲೋಕದೊಳಗಿಂದ ನೀನು ನನಗೆ ಕೊಟ್ಟ ಮನುಷ್ಯರಿಗೆ ನಿನ್ನ ಹೆಸರನ್ನು ತಿಳಿಯಪಡಿಸಿದೆನು. ಇವರು ನಿನ್ನವರಾಗಿದ್ದರು, ನೀನು ಇವರನ್ನು ನನಗೆ ಕೊಟ್ಟೆ; ಮತ್ತು ಇವರು ನಿನ್ನ ವಾಕ್ಯವನ್ನು ಕೈಕೊಂಡು ನಡೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಜಗಾತ್ ಮಾಜೆ ಮನುನ್ ತಿಯಾ ಮಾಕಾ ದಿಲ್ಲ್ಯಾಕ್ನಿ ಮಿಯಾ ತುಜಿ ವಳಕ್ ಕರುನ್ ದಿಲೊ. ತೆನಿ ತುಕಾ ಸಮಂದ್ ಪಡಲ್ಲೆ ಹಾತ್, ಅನಿ ತಿಯಾಚ್ ತೆಂಕಾ ಮಾಜ್ಯಾ ತಾಬೆತ್ ದಿಲೆಯ್, ತೆನಿ ತುಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:6
48 ತಿಳಿವುಗಳ ಹೋಲಿಕೆ  

ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.


ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.


ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.


ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


“ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ


ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


(’ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದುಕೊಳ್ಳಲಿಲ್ಲ’ ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು).


ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ.


ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.


ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.


‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.


ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!


ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ.


ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು