Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:18 - ಕನ್ನಡ ಸತ್ಯವೇದವು C.L. Bible (BSI)

18 ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ಚಳಿಯಾಗಿದ್ದದರಿಂದ ಆಳುಗಳೂ ಓಲೇಕಾರರೂ ಇದ್ದಲಿನ ಬೆಂಕಿಮಾಡಿ ಚಳಿಕಾಯಿಸಿಕೊಳ್ಳುತ್ತಾ ನಿಂತಿರಲಾಗಿ ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಚಳಿಯಿದ್ದುದರಿಂದ ಸೇವಕರೂ ಕಾವಲುಗಾರರೂ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರೊಂದಿಗೆ ನಿಂತು ಚಳಿ ಕಾಯಿಸಿಕೊಳ್ಳುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಥಂಡ್ ಕುರುಲಾಗಲ್ಲಿ ತಸೆ ಮನುನ್ ಆಳಾನಿ ಅನಿ ರಾಕ್ವಾಲ್ಯಾನಿ ಎಕ್ ಧುಮಿ ಘಾಟ್ಲ್ಯಾನಿ ಅನಿ ಧುಮಿಚ್ಯಾ ಭೊತ್ಯಾನಿ ಇಬೆ ರ್‍ಹಾವ್ನ್ ಆಗ್ ಶೆಕುಲಾಗಲ್ಲ್ಯಾನಿ. ತಸೆಮನುನ್ ಪೆದ್ರುಬಿ ಗೆಲೊ ಅನಿ ತೆಂಚ್ಯಾ ವಾಂಗ್ಡಾ ಇಬೆ ರ್‍ಹಾವ್ನ್ ಆಗ್ ಶೆಕುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:18
16 ತಿಳಿವುಗಳ ಹೋಲಿಕೆ  

ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.


ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?’ ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು.


ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.


ಚಳಿಕಾಯಿಸಿಕೊಳ್ಳುತ್ತಿದ್ದ ಪೇತ್ರನನ್ನು ಆಕೆ ದಿಟ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನ ಸಂಗಡ ಇದ್ದವನು,” ಎಂದಳು.


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.


ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.


ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು