Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:15 - ಕನ್ನಡ ಸತ್ಯವೇದವು C.L. Bible (BSI)

15 ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತ್ಯಾ ಲೊಕಾನಿ, “ತೆಕಾ ಜಿವಾನಿ ಮಾರ್! ತೆಕಾ ಜಿವಾನಿ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ತನ್ನಾ ಪಿಲಾತಾನ್ ತೆಂಕಾ, “ಮಿಯಾ ತುಮ್ಚ್ಯಾ ರಾಜಾಕ್ ಕುರ್ಸಾರ್ ಮಾರುಚೆ?” ಮನುನ್ ಇಚಾರ್‍ಲ್ಯಾನ್, ತನ್ನಾ ಯಾಜಕಾಂಚ್ಯಾ ಮುಖಂಡಾನಿ, “ಅಮ್ಕಾ ಎಕ್ಲೊಚ್ ಎಕ್ ರಾಜಾ ಹಾಯ್ ತೊ ಸಿಜರ್” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:15
9 ತಿಳಿವುಗಳ ಹೋಲಿಕೆ  

ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು.


ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.


ಜನರು, “ಅವನನ್ನು ಕೊಲ್ಲಿ, ಕೊಲ್ಲಿ,” ಎಂದು ಆರ್ಭಟಿಸುತ್ತಾ ಬೆನ್ನಟ್ಟಿ ಬರುತ್ತಿದ್ದರು.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ, ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.


ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.


ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು