Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:19 - ಕನ್ನಡ ಸತ್ಯವೇದವು C.L. Bible (BSI)

19 ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಪಿಲಾತನು “ನಜರೇತಿನ ಯೇಸು, ಯೆಹೂದ್ಯರ ಅರಸನು” ಎಂದು ಒಂದು ಫಲಕವನ್ನು ಬರೆದು ಅದನ್ನು ಆತನ ಶಿಲುಬೆಯ ಮೇಲಿಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಪಿಲಾತನು ಒಂದು ವಿಳಾಸವನ್ನು ಬರೆದು ಆತನ ಶಿಲುಬೆಯ ಮೇಲ್ಗಡೆ ಹಚ್ಚಿಸಿದನು. ಅದೇನಂದರೆ - ನಜರೇತಿನ ಯೇಸು, ಯೆಹೂದ್ಯರ ಅರಸನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪಿಲಾತನು ಒಂದು ಫಲಕವನ್ನು ಬರೆದು ಶಿಲುಬೆಯ ಮೇಲೆ ಹಚ್ಚಿದನು. ಆ ಫಲಕದಲ್ಲಿ, “ನಜರೇತಿನ ಯೇಸು, ಯೆಹೂದ್ಯರ ರಾಜನು” ಎಂದು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಪಿಲಾತಾನ್ ಎಕ್ ಫಳಿ ವರ್ತಿ “ಜೆಜು ನಜರೆನ್ ಜುದೆವಾಂಚೊ ರಾಜಾ” ಮನುನ್ ಲಿವ್ನ್ ಕುರ್ಸಾ ವರ್ತಿ ಲಾವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:19
14 ತಿಳಿವುಗಳ ಹೋಲಿಕೆ  

“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.


ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.


ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.


ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು.


ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.


ಆದುದರಿಂದ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ : “ಯೆಹೂದ್ಯರ ಅರಸ ಎಂದು ಬರೆಯುವುದು ಬೇಡ, ತಾನು ‘ಯೆಹೂದ್ಯರ ಅರಸನೆಂದು ಹೇಳಿಕೊಂಡವನು’ ಎಂದು ಬರೆಯಿರಿ,” ಎಂದರು.


ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.


“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.


ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸು ಸ್ವಾಮಿಯನ್ನು ಕರೆಯಿಸಿ, “ನೀನು ಯೆಹೂದ್ಯರ ಅರಸನೋ?’ ಎಂದು ಕೇಳಿದನು.


ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.


“ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.


ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.


“ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು