Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:20 - ಕನ್ನಡ ಸತ್ಯವೇದವು C.L. Bible (BSI)

20 ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದದರಿಂದ ಯೆಹೂದ್ಯರಲ್ಲಿ ಬಹಳ ಮಂದಿ ಆ ವಿಳಾಸವನ್ನು ಓದಿದರು. ಅದು ಇಬ್ರಿಯ ಲಾತೀನ್ ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಫಲಕವನ್ನು ಯೆಹೂದ್ಯರ ಭಾಷೆಯಲ್ಲಿ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು. ಫಲಕದಲ್ಲಿ ಬರೆದಿರುವುದನ್ನು ಅನೇಕ ಯೆಹೂದ್ಯರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳವು ಪಟ್ಟಣದ ಸಮೀಪದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಸುಮಾರ್ ಲೊಕಾನಿ ಹೆ ವಾಚ್ವುಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ಜೆಜುಕ್ ಕುರ್ಸಾ ವರ್ತಿ ಮಾರಲ್ಲೊ ಜಾಗೊ ಶಾರಾತ್ನಾ ಜಗೊಳ್ ಹೊತ್ತೊ, ತೆ ಲಿವಲ್ಲೆ, ಹೆಬ್ರೆವ್, ಲ್ಯಾಟಿನ್, ಅನಿ ಗ್ರಿಕ್ ಬಾಶೆತ್ ಲಿವಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:20
11 ತಿಳಿವುಗಳ ಹೋಲಿಕೆ  

ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.


ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.


ಪೌಲನು ಹೀಗೆ ತಮ್ಮನ್ನು ಸಂಬೋಧಿಸಿ ಹಿಬ್ರು ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದ್ದೇ ಅಲ್ಲಿದ್ದ ಜನರು ಇನ್ನೂ ನಿಶ್ಯಬ್ಧರಾದರು. ಅವನು ಮುಂದುವರಿಯುತ್ತಾ ಇಂತೆಂದನು:


ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:


ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?


ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.


ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.


ಸಮಾಧಿಯು ಹತ್ತಿರದಲ್ಲೇ ಇದ್ದುದರಿಂದ ಹಾಗೂ ಮರುದಿನ ಪಾಸ್ಕಹಬ್ಬವಾದುದರಿಂದ ಯೇಸುವಿನ ಪಾರ್ಥಿವ ಶರೀರವನ್ನು ಅಲ್ಲೇ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು