Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:7 - ಕನ್ನಡ ಸತ್ಯವೇದವು C.L. Bible (BSI)

7 ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ್ಯರು ಅವನಿಗೆ - ನಮಗೆ ಒಂದು ನೇಮ ಉಂಟು, ಆ ನೇಮದ ಪ್ರಕಾರ ಇವನು ಸಾಯತಕ್ಕವನು; ಯಾಕಂದರೆ ಅವನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದ್ಯರು, “ನಮಗೊಂದು ನಿಯಮವಿದೆ. ಅದರ ಪ್ರಕಾರ ಇವನಿಗೆ ಮರಣದಂಡನೆ ಆಗಲೇಬೇಕು. ಯಾಕೆಂದರೆ ಇವನು ತನ್ನನ್ನು ದೇವರ ಮಗನೆಂದು ಹೇಳಿಕೊಂಡಿದ್ದಾನೆ” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ತ್ಯಾ ಜುದೆವಾನಿ “ಅಮ್ಕಾ ಎಕ್ ಖಾಯ್ದೊ ಹಾಯ್ ಅನಿ ತ್ಯಾ ಖಾಯ್ದ್ಯಾ ಪರ್‍ಕಾರ್ ಹೆಕಾ ಮರ್‍ನಾಚಿ ಶಿಕ್ಷಾ ಹೊವ್ಕ್ ಪಾಜೆ, ಕಶ್ಯಾಕ್ ಮಟ್ಲ್ಯಾರ್ ತೊ ಅಪ್ನಾಕುಚ್ ದೆವಾಚೊಲೆಕ್ ಮನುನ್ ಮಾನ್ತಾ” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:7
14 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.


ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.


ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.


ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!


ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು.


“ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು