Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:9 - ಕನ್ನಡ ಸತ್ಯವೇದವು C.L. Bible (BSI)

9 ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೊ ಪರ್ತುನ್ ಘರಾತ್ ಗೆಲೊ, ಅನಿ ಜೆಜುಕ್ “ತಿಯಾ ಖೈತ್ನಾ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ಜೆಜುನ್ ಜಬಾಬ್ ದಿವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:9
18 ತಿಳಿವುಗಳ ಹೋಲಿಕೆ  

ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸು ಸ್ವಾಮಿಯನ್ನು ಕರೆಯಿಸಿ, “ನೀನು ಯೆಹೂದ್ಯರ ಅರಸನೋ?’ ಎಂದು ಕೇಳಿದನು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.


ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು.


ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


ಅದಕ್ಕೆ ಯೇಸು, “ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?” ಎನ್ನಲು


ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು.


ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು