Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:10 - ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಎಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಕೊಟ್ಟು ಅಮಲೇರಿದ ಮೇಲೆ ಸಾಧಾರಣವಾದ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿರುವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅನಿ “ಸಗ್ಳಿ ಲೊಕಾ ಅದ್ದಿ ಬರೊ ವಾಯ್ನ್ ವಾಟ್ತ್ಯಾತ್, ಪಾವ್ನ್ಯಾನಿ ಪಿವ್ನ್ ಖುಶಿ ಹೊಲ್ಲ್ಯಾ ಮಾನಾ, ಸಾದ್ರನಾಚೊ ವಾಯ್ನ್ ವಾಟ್ತ್ಯಾತ್, ಖರೆ ತಿಯಾ ಅಜುನ್‍ಬಿ ಬರೊ ವಾಯ್ನ್ ಥವ್ಲೆ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:10
15 ತಿಳಿವುಗಳ ಹೋಲಿಕೆ  

ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,


“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ


ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ.


ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.


ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.


ನಿದ್ರೆಯೂ ಕುಡುಕತನವೂ ರಾತ್ರಿಗೆ ಸಂಬಂಧಿಸಿದವುಗಳು.


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು