Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:11 - ಕನ್ನಡ ಸತ್ಯವೇದವು C.L. Bible (BSI)

11 ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸು ಈ ಮೊದಲನೆಯ ಸೂಚಕಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜೆಜುನ್ ಗಾಲಿಲಿಯಾತ್ಲ್ಯಾ ಕಾನಾ ಮನ್ತಲ್ಯಾ ಶಾರಾತ್ ಪಯ್ಲೆಚೆ ಅಜಾಪ್ ಕರ್ಲ್ಯಾನ್, ಥೈ ತೆನಿ ಅಪ್ನಾಚಿ ಮಹಿಮಾ ದಾಕ್ವುನ್ ದಿಲ್ಯಾನ್, ಅನಿ ತೆಚಿ ಶಿಸಾ ತೆಚ್ಯಾ ವರ್ತಿ ತೆಕಾ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:11
43 ತಿಳಿವುಗಳ ಹೋಲಿಕೆ  

ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.


ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?


ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.


ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.


ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II


‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.


ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.


ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.


ಮಾರನೆಯ ದಿನ ಗಲಿಲೇಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು.


ಯೇಸು ಇದನ್ನು ತಿಳಿದು ಜುದೇಯವನ್ನು ಬಿಟ್ಟು ಮತ್ತೆ ಗಲಿಲೇಯಕ್ಕೆ ಹೊರಟರು.


ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದು, ಮಾಡಿದ ಎರಡನೆಯ ಸೂಚಕಕಾರ್ಯ ಇದು.


ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.


ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.


ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಈ ಸೂಚಕಕಾರ್ಯವನ್ನು ಕೇಳಿದ್ದ ಕಾರಣದಿಂದಲೂ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.


ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ.


ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು