Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:22 - ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ - ಪವಿತ್ರಾತ್ಮವರವನ್ನು ತಕ್ಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಹೀಗೆ ಹೇಳಿದ ನಂತರ ಶಿಷ್ಯರ ಮೇಲೆ ಉಸಿರೂದಿ, “ಪವಿತ್ರಾತ್ಮನನ್ನು ಸ್ವೀಕರಿಸಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಮಾನಾ ತೆನಿ ತೆಂಚೆ ವರ್ತಿ ಅಪ್ನಾಚೊ ಶ್ವಾಸ್ ಸೊಡ್ಲ್ಯಾನ್, ಅನಿ,“ಪವಿತ್ರ್ ಆತ್ಮ್ಯಾಕ್ ಘೆವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:22
17 ತಿಳಿವುಗಳ ಹೋಲಿಕೆ  

ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


“ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು.


ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.


ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.


ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?


ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,


“ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.


ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು