Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:9 - ಕನ್ನಡ ಸತ್ಯವೇದವು C.L. Bible (BSI)

9 ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬದಾಗಿ ಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 (ಯೇಸು ಸತ್ತು ಜೀವಂತವಾಗಿ ಎದ್ದುಬರಬೇಕೆಂಬುದಾಗಿ ಪವಿತ್ರ ಗ್ರಂಥದಲ್ಲಿ ಬರೆದಿರುವುದು ಈ ಶಿಷ್ಯರಿಗೆ ಇನ್ನೂ ಅರ್ಥವಾಗಿರಲಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೊ ಮರ್‍ನಾತ್ನಾ ಝಿತ್ತೊ ಹೊವ್ನ್ ಉಟುಕ್ ಪಾಜೆ ಮನುನ್ ಪವಿತ್ರ್ ಪುಸ್ತಕಾನ್ ಸಾಂಗಟಲ್ಲೆ ತೆಂಕಾ ಅಜುನ್ಬಿ ಕಳುಕ್ ನತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:9
22 ತಿಳಿವುಗಳ ಹೋಲಿಕೆ  

ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.


ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.


ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.


ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು