Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:12 - ಕನ್ನಡ ಸತ್ಯವೇದವು C.L. Bible (BSI)

12 ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೇಸು ಅವರಿಗೆ, “ಬಂದು ಊಟ ಮಾಡಿರಿ” ಎಂದು ಹೇಳಿದನು. ಶಿಷ್ಯರು ಆತನನ್ನು ಕರ್ತನೆಂದು ತಿಳಿದಿದ್ದರಿಂದ “ನೀನು ಯಾರು?” ಎಂದು ಕೇಳುವುದಕ್ಕೆ ಅವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೇಸು ಅವರಿಗೆ - ಬಂದು ಊಟಮಾಡಿರಿ ಎಂದು ಹೇಳಿದನು. ಶಿಷ್ಯರು ಆತನನ್ನು ಸ್ವಾವಿುಯವರೆಂದು ತಿಳಿದಿದ್ದರಿಂದ ನೀನಾರೆಂದು ವಿಚಾರಿಸುವದಕ್ಕೆ ಅವರಲ್ಲಿ ಒಬ್ಬರೂ ಧೈರ್ಯಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಅವರಿಗೆ, “ಬಂದು ಊಟ ಮಾಡಿ” ಎಂದು ಹೇಳಿದನು. ಶಿಷ್ಯರಲ್ಲಿ ಒಬ್ಬರಾದರೂ, “ನೀನು ಯಾರು?” ಎಂದು ಆತನನ್ನು ಕೇಳಲಿಲ್ಲ. ಆತನು ಪ್ರಭುವೆಂದು ಅವರಿಗೆ ತಿಳಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜುನ್ ತೆಂಕಾ,“ಯೆವಾ ಅನಿ ಖಾವಾ” ಮಟ್ಲ್ಯಾನ್, ತೆಕಾ “ತಿಯಾ ಕೊನ್?” ಮನುನ್ ಇಚಾರುಕ್ ಶಿಸಾನಿತ್ಲ್ಯಾ ಕೊನಾಕ್ಬಿ ಧೈರೊ ಹೊವ್ಕ್ ನಾ, ಕಶ್ಯಾಕ್ ಮಟ್ಲ್ಯಾರ್ ತೊ ಧನಿಚ್ ಮನುನ್ ತೆಂಕಾ ಕಳಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:12
9 ತಿಳಿವುಗಳ ಹೋಲಿಕೆ  

ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.


ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು?


ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.


ಆದರೆ ಯೇಸು ಹೇಳಿದ ಈ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು.


ಅಷ್ಟರಲ್ಲಿ ಹಿಂದಿರುಗಿ ಬಂದ ಶಿಷ್ಯರು ಯೇಸು ಆ ಮಹಿಳೆಯೊಡನೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೆ, “ಏನು ಬೇಕು?” ಎಂದು ಆಕೆಯನ್ನಾಗಲಿ. “ಆಕೆಯೊಡನೆ ಏಕೆ ಮಾತನಾಡುತ್ತಿದ್ದೀರಿ?” ಎಂದು ಯೇಸುವನ್ನಾಗಲಿ ಅವರು ಕೇಳಲಿಲ್ಲ.


ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.


ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.


ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುತಂದನು. ಬಲೆಯ ತುಂಬ ದೊಡ್ಡಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು