Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:13 - ಕನ್ನಡ ಸತ್ಯವೇದವು C.L. Bible (BSI)

13 ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪರಲೋಕದಿಂದ ಇಳಿದುಬಂದವನೇ ಅಂದರೆ ಮನುಷ್ಯಕುಮಾರನೇ ಹೊರತು ಮತ್ತಾರೂ ಪರಲೋಕಕ್ಕೆ ಏರಿಹೋದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಸರ್‍ಗಾ ವೈನಾ ಉತ್ರುನ್ ಯೆಲ್ಲ್ಯಾ ಮಾನ್ಸಾಚ್ಯಾ ಲೆಕಾಕ್ ಎಕ್ಲ್ಯಾಕ್ ಸೊಡುನ್, ಅನಿ ಕೊನ್ಬಿ ಸರ್ಗಾತ್ ಗೆಲ್ಲೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:13
24 ತಿಳಿವುಗಳ ಹೋಲಿಕೆ  

ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.


ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.


ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.


ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,


ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?


ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.


ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ.


ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.


ಇದು ಮೇಲಣ ಲೋಕದಲ್ಲಿರುವ ಮಾತಲ್ಲ, ‘ನಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು