Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:23 - ಕನ್ನಡ ಸತ್ಯವೇದವು C.L. Bible (BSI)

23 ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೋಹಾನನೂ ಸಲೀಮೂರಿನ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನಮಾಡಿಸುತ್ತಿದ್ದನು; ಅಲ್ಲಿ ಬಹಳ ನೀರಿತ್ತು; ಜನರು ಬಂದು ಸ್ನಾನಮಾಡಿಸಿಕೊಳ್ಳುತ್ತಾ ಇದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋಹಾನನು ಸಹ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಐನೋನ್ ಎಂಬ ಊರು ಸಲೀಮ್ ಊರಿನ ಸಮೀಪದಲ್ಲಿದೆ. ಅಲ್ಲಿ ಬೇಕಾದಷ್ಟು ನೀರಿದ್ದುದರಿಂದ ಯೋಹಾನನು ಅಲ್ಲಿ ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಜನರು ಅಲ್ಲಿಗೆ ಬಂದು ದೀಕ್ಷಾಸ್ನಾನ ತೆಗೆದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಇದಲ್ಲದೆ ಯೋಹಾನನು ಸಹ ಸಲೀಮ್ ಎಂಬ ಊರಿನ ಸಮೀಪದಲ್ಲಿದ್ದ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಏಕೆಂದರೆ ಅಲ್ಲಿ ಬಹಳ ನೀರು ಇತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಸಾಲಿಮ್ ಮನ್ತಲ್ಯಾ ಗಾಂವಾಂಚ್ಯಾ ಎನೊನ್ ಮನ್ತಲ್ಯಾ ಜಾಗ್ಯಾರ್ ಪಾಜೆ ತವ್ಡೆ ಪಾನಿ ಹೊತ್ತೆ, ತಸೆ ಮನುನ್ ಜುವಾಂವ್ ಥೈ ಲೊಕಾಕ್ನಿ ಬಾಲ್ತಿಮ್ ದಿವ್ಕ್ ಲಾಗಲ್ಲೊ, ಲೊಕಾ ಯೆವ್ನ್ ಬಾಲ್ತಿಮ್ ಘೆವ್‍ಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:23
13 ತಿಳಿವುಗಳ ಹೋಲಿಕೆ  

ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?


ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.


ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ.


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗು ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.


ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು : “ಅಲ್ಲೆಲೂಯ ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.


ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು.


ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.


ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.


ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು