Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:32 - ಕನ್ನಡ ಸತ್ಯವೇದವು C.L. Bible (BSI)

32 ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ತಾನು ನೋಡಿ ಕೇಳಿದ್ದಕ್ಕೆ ಸಾಕ್ಷಿಕೊಡುತ್ತಾನೆ; ಆದರೆ ಆತನ ಸಾಕ್ಷಿಯನ್ನು ಯಾರೂ ಒಪ್ಪುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತೊ ಜೆ ಕಾಯ್ ಅಪ್ನಿ ಬಗಟ್ಲ್ಯಾನಾಯ್, ಅನಿ ಆಯಿಕ್ಲ್ಯಾನಾಯ್ ತ್ಯೆಚ್ಯಾ ವಿಶಯಾತುಚ್ ಲೊಕಾ ಸ್ವಿಕಾರ್ ಕರಿನಾತ್. ಖರೆ ಅಜುನ್‍ಬಿ ಕೊನ್ಬಿ ತೆನಿ ದಿಲ್ಲಿ ಸಾಕ್ಷಿ ಮಾನುನ್ ಘೆಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:32
13 ತಿಳಿವುಗಳ ಹೋಲಿಕೆ  

ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.


ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು.


ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.


ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.


ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.


ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು