Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:20 - ಕನ್ನಡ ಸತ್ಯವೇದವು C.L. Bible (BSI)

20 ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು, ಆದರೆ ಯೆಹೂದ್ಯರಾದ ನೀವು ಆರಾಧನೆ ಮಾಡತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ ಎಂದು ನೀವು ಹೇಳುತ್ತೀರಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಮ್ಮ ಹಿರಿಯರು ಈ ಬೆಟ್ಟದಲ್ಲಿ ದೇವಾರಾಧನೆ ಮಾಡುತ್ತಿದ್ದರು; ಆದರೆ ನೀವು ಆರಾಧನೆಮಾಡತಕ್ಕ ಸ್ಥಳವು ಯೆರೂಸಲೇವಿುನಲ್ಲಿ ಅದೆ ಅನ್ನುತ್ತೀರಿ ಎಂದು ಹೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಮ್ಮ ಪಿತೃಗಳು ಈ ಗುಡ್ಡದ ಮೇಲೆ ಆರಾಧಿಸಿದರು. ಆದರೆ ಜನರು ಆರಾಧಿಸಬೇಕಾದ ಸ್ಥಳ ಜೆರುಸಲೇಮ್ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅಮ್ಚ್ಯಾ ಸಮಾರಿಯಾಚ್ಯಾ ಅದ್ಲ್ಯಾ ಲೊಕಾನಿ ತ್ಯಾ ಮಡ್ಡಿ ವರ್ತಿ ಆರಾದನ್ ಕರ್ಲ್ಯಾನಿ, ಖರೆ ತುಮಿ ಜುದೆವ್ ಲೊಕಾ ದೆವಾಚಿ ಆರಾದನ್ ಕರ್‍ತಲೊ ಜಾಗೊ ಜೆರುಜಲೆಮ್, ಅನಿ ಜೆರುಲೆಮಾತುಚ್ ಯೆವ್ನ್ ತೆಚೆ ಆರಾದನ್ ಕರುಚಿ ಮನುನ್ ಸಾಂಗ್ತ್ಯಾಶಿ” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:20
20 ತಿಳಿವುಗಳ ಹೋಲಿಕೆ  

“ನೀವು ಜೋರ್ಡನ್ ನದಿಯನ್ನು ದಾಟಿದ ಮೇಲೆ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೋಸೆಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಜನರಿಗೆ ಆಶೀರ್ವಚನಗಳನ್ನು ಉಚ್ಚರಿಸಬೇಕು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.


ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ.


ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ.


ಆರಿಸಿಕೊಂಡಿಹನು ಪ್ರಭು ಸಿಯೋನ್ ನಗರವನು I ಅಪೇಕ್ಷಿಸಿಹನು ತನ್ನ ನಿವಾಸಕ್ಕಾಗಿ ಅದನು II


ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II


ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು.


ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.


“ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು