Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:6 - ಕನ್ನಡ ಸತ್ಯವೇದವು C.L. Bible (BSI)

6 ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ದಾರಿನಡೆದು ದಣಿದು ಆ ಬಾವಿಯ ಬಳಿಯಲ್ಲಿ ಹಾಗೆ ಕೂತುಕೊಂಡನು; ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಥೈ ಜಾಕೊಬಾಚಿ ಭಾಂಯ್ ಹೊತ್ತಿ, ಜೆಜುಕ್ ಚಲುನ್‍ಚಲುನ್ ಫಿರೆ ಹೊಲ್ಲೆ, ಮನುನ್ ತೊ ಥೈ ಭಾಂಯ್ಚ್ಯಾ ಕಟ್ಟ್ಯಾರ್ ಬಸ್ಲೊ, ತನ್ನಾ ಜಗ್ಗೊಳ್ ದೊಪಾರ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:6
12 ತಿಳಿವುಗಳ ಹೋಲಿಕೆ  

ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.


ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ.


ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.


ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.


ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.


ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.


ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು