Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:10 - ಕನ್ನಡ ಸತ್ಯವೇದವು C.L. Bible (BSI)

10 ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಆ ದಿವಸ ಸಬ್ಬತ್‍ದಿನವಾಗಿತ್ತು; ಹೀಗಿರುವದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ - ಈ ಹೊತ್ತು ಸಬ್ಬತ್‍ದಿನವಾಗಿದೆ; ನೀನು ಹಾಸಿಗೆಯನ್ನು ಹೊರುವದು ಸರಿಯಲ್ಲವೆಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚೆಸಾಟ್ನಿ ಜುದೆವ್ ಲೊಕಾಂಚ್ಯಾ ಅದಿಕಾರ್‍ಯಾನಿ ತ್ಯಾ ಗುನ್ ಹೊಲ್ಲ್ಯಾ ಮಾನ್ಸಾಕ್, “ಸಬ್ಬತಾಚ್ಯಾ ದಿಸಿ ಹಾತ್ರಾನ್ ವಾವುನ್ ಘೆವ್ನ್ ಜಾತಲೆ ಅಮ್ಚ್ಯಾ ಖಾಯ್ದ್ಯಾಚ್ಯಾ ಪರ್‍ಕಾರ್ ಚುಕ್” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:10
19 ತಿಳಿವುಗಳ ಹೋಲಿಕೆ  

ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.


ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು.


ಮನಮುಟ್ಟಿ ಇದನ್ನು ಗಮನಿಸಿರಿ : ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿ. ಜೆರುಸಲೇಮಿನ ಬಾಗಿಲುಗಳಲ್ಲಿ ಅದನ್ನು ತರಲೇಬೇಡಿ.


ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.


“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.


ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿ ಮಾಡಬಹುದಾದರೆ ಅದೇ ಸಬ್ಬತ್ ದಿನದಲ್ಲಿ ನಾನು ಒಬ್ಬ ಮನುಷ್ಯನನ್ನು ಸಂಪೂರ್ಣ ಸ್ವಸ್ಥಪಡಿಸಿದ್ದಕ್ಕೆ ನೀವು ಸಿಟ್ಟಾಗಬೇಕೆ?


ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ


ಬತ್ತಿದ ಕೈಯುಳ್ಳ ಒಬ್ಬ ವ್ಯಕ್ತಿ ಅಲ್ಲಿದ್ದನು. ಯೇಸುವಿನ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ಕೆಲವರು, “ಸಬ್ಬತ್ ದಿನ ಸ್ವಸ್ಥಗೊಳಿಸುವುದು ಶಾಸ್ತ್ರಬದ್ಧವೇ?" ಎಂದು ಯೇಸುವನ್ನು ಕೇಳಿದರು.


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು.


ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು