Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:14 - ಕನ್ನಡ ಸತ್ಯವೇದವು C.L. Bible (BSI)

14 ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು - ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪಮಾಡಬೇಡ; ನಿನಗೆ ಹೆಚ್ಚಿನ ಕೇಡು ಬಂದೀತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅನಂತರ ಯೇಸು ಆ ಮನುಷ್ಯನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ನೋಡು, ಈಗ ನೀನು ಗುಣಹೊಂದಿರುವೆ. ಆದರೆ ಪಾಪ ಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ಹೆಚ್ಚಿನ ಕೇಡು ನಿನಗೆ ಸಂಭವಿಸಬಹುದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಾನಾಸರ್ ತೆಕಾ ಜೆಜು ದೆವಾಚ್ಯಾ ಗುಡಿತ್ ಭೆಟ್ಲೊ, ಅನಿ, “ಆಯ್ಕ್, ತಿಯಾ ಅತ್ತಾ ಗುನ್ ಹೊಲೆ, ತೆಚೆಸಾಟ್ನಿ ಪಾಪ್ ಕರುನಕೊ, ಅನಿಬಿ ತುಕಾ ಕಾಯ್ಬಿ ವಾಯ್ಟ್ ಹೊತಲೆ ನಕ್ಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:14
23 ತಿಳಿವುಗಳ ಹೋಲಿಕೆ  

ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).


ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ II


ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.


ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.


“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೂ ನನ್ನ ಮಾತಿಗೆ ಕಿವಿಗೊಡದೆ ನನಗೆ ವಿರೋಧವಾಗಿ ನಡೆದರೆ,


ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.


ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II


ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.


ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.


ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.


ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು.


ಯಾಜಕನು ಪರೀಕ್ಷಿಸಿ ನೋಡುವಾಗ ಆ ಕಲೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠಹುಟ್ಟಿರುವುದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.


ಆತನ ವಿಧಿನಿಯಮಗಳನು ಅಲಕ್ಷ್ಯಮಾಡದೆ I ಆತನಾಜ್ಞೆಗಳನ್ನಿಟ್ಟೆ ಸದಾ ನನ್ನ ಕಣ್ಗಳ ಮುಂದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು