Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:18 - ಕನ್ನಡ ಸತ್ಯವೇದವು C.L. Bible (BSI)

18 ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಹ್ಯಾ ಗೊಸ್ಟಿಕ್ ಲಾಗುನ್ ಜುದೆವಾಂಚ್ಯಾ ಅದಿಕಾರ್‍ಯಾಂಚ್ಯಾ ಮನಾತ್ನಿ ಜೆಜುಕ್ ಜಿವಾನಿ ಮಾರುಕ್ ಪಾಜೆ ಮನ್ತಲೊ ಘಟ್ ನಿರ್‍ದಾರ್ ಹೊಲೊ; ತೆನಿ ಖಾಲಿ ಸಬ್ಬಾತಾಚೊ ಖಾಯ್ದೊ ಮೊಡ್ಲ್ಯಾನ್ ಮನುನ್ ಎವ್ಡೆಚ್ ನ್ಹಯ್, ಜಾಲ್ಯಾರ್ ತೆನಿ ದೆವಾಕುಚ್ ಅಪ್ನಾಚೊ ಸ್ವತಾಚೊ ಬಾಬಾ ಮನುನ್ ಘೆಟಲ್ಲ್ಯಾನ್, ಅನಿ ಅಪ್ನಾಕುಚ್ ದೆವಾಚ್ಯಾ ಸಮಾ ಮನುನ್ ಕರುನ್ ಘೆಟಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:18
21 ತಿಳಿವುಗಳ ಹೋಲಿಕೆ  

ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.


ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.


ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.


ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,


ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.


ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.


ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?


ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ?


ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.


ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.


ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು