Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:24 - ಕನ್ನಡ ಸತ್ಯವೇದವು C.L. Bible (BSI)

24 “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಮರಣದಿಂದ ಪಾರಾಗಿ ಜೀವಕ್ಕೆ ಸೇರಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಮಿಯಾ ತುಮ್ಕಾ ಖರೆ ಅಸಲ್ಲೆ ಸಾಂಗುಕ್ ಲಾಗ್ಲಾ, ಜೆ ಕೊನ್ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಆಯಿಕ್ತಾ, ಅನಿ ಮಾಕಾ ಧಾಡಲ್ಲ್ಯಾ ವರ್ತಿ ವಿಶ್ವಾಸ್ ಕರ್‍ತಾ, ತೆಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವ್ತಾ. ತೆಂಚಿ ಝಡ್ತಿ ಕರುನ್ ಹೊಯ್ನಾ ತೆನಿ ಮರ್‍ನಾತ್ನಾ ಜಿವನಾಕ್ ಪಾರ್ ಹೊವ್ನ್ ಗೆಲ್ಲೆ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:24
28 ತಿಳಿವುಗಳ ಹೋಲಿಕೆ  

ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.


ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.


ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು : “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ.


ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.


ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು