Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:36 - ಕನ್ನಡ ಸತ್ಯವೇದವು C.L. Bible (BSI)

36 ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಮಾಜ್ಯಾಕ್ಡೆ ಮಾಜ್ಯಾಚ್ ವಿಶಯಾತ್ ಜುವಾಂವಾಕ್ ದಿಲ್ಲ್ಯಾ ಸಾಕ್ಷಿನ್ಕಿ ಮೊಟಿ ಸಾಕ್ಷಿ ಹಾಯ್! ಜೆ ಕಾಯ್ ಮಿಯಾ ಕರುಲಾಲಾ, ತೆ ಮಾಜ್ಯಾ ಬಾಬಾನುಚ್ ಮಾಕಾ ಕರ್ ಮನುನ್ ದಿಲ್ಲೆ ಹಾಯ್, ಹಿ ಮಿಯಾ ಕರ್‍ತಲಿ ಕಾಮಾಚ್ ಮಾಕಾ ಬಾಬಾನ್ ಧಾಡುನ್ ದಿಲ್ಯಾನಾಯ್ ಮನುನ್ ದಾಕ್ವುನ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:36
17 ತಿಳಿವುಗಳ ಹೋಲಿಕೆ  

ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.


ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.


ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ.


ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.


ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.


ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ.


“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.


ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.


ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.


ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.


ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.


ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು