Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:39 - ಕನ್ನಡ ಸತ್ಯವೇದವು C.L. Bible (BSI)

39 ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತುಮಿ ಪವಿತ್ರ್ ಪುಸ್ತಕಾತ್ಲೆ ಬರೆ ಕರುನ್ ಶಿಕ್ಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತ್ಯಾತುರ್‍ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಹಾಯ್ ಮನುನ್ ತುಮಿ ಚಿಂತ್ಯಾಶಿ, ಖರೆ ತಿ ಸಗ್ಳಿ ನಿಯಮಾ ಪವಿತ್ರ್ ಪುಸ್ತಾಕಾ ಮಾಜ್ಯಾಚ್ ವಿಶಯಾತ್ ಬೊಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:39
51 ತಿಳಿವುಗಳ ಹೋಲಿಕೆ  

ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.


ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.


ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.


ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?


ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?" ಎಂದರು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರಗ್ರಂಥದಲ್ಲಿ ವಾಗ್ದಾನಮಾಡಿದ್ದರು.


ಅಗ್ರಿಪ್ಪ ರಾಜರೇ, ತಮಗೆ ಪ್ರವಾದಿಗಳಲ್ಲಿ ನಂಬಿಕೆಯುಂಟೋ? ಉಂಟೆಂದು ನಾನು ಬಲ್ಲೆ,” ಎಂದನು.


ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.


ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.


ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.


ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.


ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”


ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.


ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II


ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.


“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.


ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!


ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.


ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು