Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:12 - ಕನ್ನಡ ಸತ್ಯವೇದವು C.L. Bible (BSI)

12 ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಮಿಕ್ಕ ತುಂಡುಗಳನ್ನು ಕೂಡಿಸಿರಿ, ಇದರಲ್ಲಿ ಯಾವುದೂ ವ್ಯರ್ಥವಾಗಬಾರದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ - ವಿುಕ್ಕತುಂಡುಗಳನ್ನು ಕೂಡಿಸಿರಿ; ಇದರಲ್ಲಿ ಯಾವದೂ ವ್ಯರ್ಥವಾಗಬಾರದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರೆಲ್ಲರೂ ಊಟ ಮಾಡಿ ತೃಪ್ತರಾದ ಮೇಲೆ ಯೇಸು ತನ್ನ ಶಿಷ್ಯರಿಗೆ, “ಉಳಿದುಹೋದ ರೊಟ್ಟಿ ಮತ್ತು ಮೀನುಗಳ ತುಂಡುಗಳನ್ನು ಒಟ್ಟುಗೂಡಿಸಿರಿ. ಯಾವುದನ್ನೂ ಹಾಳುಮಾಡಬೇಡಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತನ್ನಾ ಸಗ್ಳ್ಯಾನಿ ಪೊಟ್ಬರ್ ಜೆವ್ನ್ ಹೊಲ್ಲ್ಯಾ ತನ್ನಾ ತೆನಿ ಅಪ್ನಾಚ್ಯಾ ಶಿಸಾಕ್ನಿ, “ಹುರಲ್ಲೆ ಸಗ್ಳೆ ತುಕ್ಡೆ ಗೊಳಾ ಕರಾ, ಉಲ್ಲೆಸೆಬಿ ಅಮಿ ಹಾಳ್ ಕರ್‍ತಲೆ ನಕ್ಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:12
12 ತಿಳಿವುಗಳ ಹೋಲಿಕೆ  

ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ಎಲ್ಲರೂ ಹೊಟ್ಟೆ ತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದುವು.


ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.


ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.


ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು