Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:29 - ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೇಸು - ದೇವರು ಮೆಚ್ಚುವ ಕೆಲಸ ಯಾವದಂದರೆ ಆತನು ಕಳುಹಿಸಿಕೊಟ್ಟವನನ್ನು ನೀವು ನಂಬುವದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜುನ್ ತೆಂಕಾ, “ದೆವಾಕ್ ಪಾಜೆ ಹೊಲ್ಲೆ ಕಾಯ್ ಮಟ್ಲ್ಯಾರ್ ತೆನಿ ಧಾಡುನ್ ದಿಲ್ಲ್ಯಾಚ್ಯಾ ವರ್ತಿ ವಿಶ್ವಾಸ್, ಕರ್‍ತಲೆ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:29
21 ತಿಳಿವುಗಳ ಹೋಲಿಕೆ  

ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


“ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನುಮಾಡಬೇಕು?” ಎಂದು ಕೇಳಿದರು.


ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.


ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.


ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.


ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು