Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:30 - ಕನ್ನಡ ಸತ್ಯವೇದವು C.L. Bible (BSI)

30 ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವರು ಆತನನ್ನು - ಹಾಗಾದರೆ ನಾವು ನೋಡಿ ನಿನ್ನ ಮಾತನ್ನು ನಂಬುವಂತೆ ಏನು ಸೂಚಕಕಾರ್ಯ ಮಾಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಜನರು, “ದೇವರಿಂದ ಕಳುಹಿಸಲ್ಪಟ್ಟಾತನು ನೀನೇ ಎಂಬುದನ್ನು ನಿರೂಪಿಸುವುದಕ್ಕಾಗಿ ನೀನು ಯಾವ ಸೂಚಕಕಾರ್ಯವನ್ನು ಮಾಡುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಲೊಕಾ ತೆನಿ,“ಅಮಿ ಬಗುನ್ ತುಜೆ ವರ್ತಿ ವಿಶ್ವಾಸ್ ಕರಿ ಸರ್ಕೆ ಕಾಯ್ ಅಜಾಪ್ ಅಮ್ಕಾ ತಿಯಾ ಕರುನ್ ದಾಕ್ವುತೆಯ್? ಕಾಯ್ ಕಾಮ್ ಕರುನ್ ದಾಕ್ವುತೆ ತಿಯಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:30
22 ತಿಳಿವುಗಳ ಹೋಲಿಕೆ  

ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.


ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.


ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ.


ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”


ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.


ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.


“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ !


ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.


ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.


ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.


ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು.


"ಫರೋಹನು ನಿಮಗೆ, ‘ನಾನು ನಿಮ್ಮ ಮಾತನ್ನು ನಂಬಬೇಕಾದರೆ ಮಹತ್ಕಾರ್ಯವೊಂದನ್ನು ನನ್ನ ಮುಂದೆ ಮಾಡಿ,’ ಎಂದು ಹೇಳಿದರೆ ಮೋಶೆ ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದ ಮೇಲೆ ಬಿಸಾಡು’ ಎಂದು ಹೇಳಲಿ. ಅದು ಸರ್ಪವಾಗುವುದು,” ಎಂದು ಹೇಳಿದರು.


ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.


ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು