Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:51 - ಕನ್ನಡ ಸತ್ಯವೇದವು C.L. Bible (BSI)

51 ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಪರಲೋಕದಿಂದ ಇಳಿದುಬರುವ ಜೀವವುಳ್ಳ ರೊಟ್ಟಿಯು ನಾನೇ; ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾಕಾಲ ಬದುಕುವನು. ಮತ್ತು ನಾನು ಕೊಡುವ ರೊಟ್ಟಿ ನನ್ನ ಮಾಂಸವೇ; ಅದನ್ನು ಲೋಕದ ಜೀವಕ್ಕೋಸ್ಕರ ಕೊಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಪರಲೋಕದಿಂದ ಇಳಿದುಬಂದ ಜೀವವುಳ್ಳ ರೊಟ್ಟಿ ನಾನೇ. ಈ ರೊಟ್ಟಿಯನ್ನು ತಿನ್ನುವವನು ಶಾಶ್ವತವಾಗಿ ಜೀವಿಸುವನು. ಈ ರೊಟ್ಟಿಯೇ ನನ್ನ ದೇಹ. ಈ ಲೋಕದಲ್ಲಿರುವ ಜನರು ಜೀವವನ್ನು ಹೊಂದಿಕೊಳ್ಳಲೆಂದು ನಾನು ನನ್ನ ದೇಹವನ್ನೇ ಕೊಡುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಮಿಯಾ ಸರ್ಗಾವೈನಾ, ಉತ್ರುನ್ ಯೆಲ್ಲಿ ಝಿತ್ತಿ ಭಾಕ್ರಿ, ಹಿ ಭಾಕ್ರಿ ತುಮಿ ಖಾಲ್ಯಾಶಿ ತರ್, ತುಮ್ಕಾ ಮರಾನುಚ್‍ ನಾ, ಅನಿ ಹ್ಯಾ ಜಗಾಕ್ ಜಿವ್ ದಿವ್‍ಸಾಟಿ ಮನುನ್ ಮಿಯಾ ತುಮ್ಕಾ ದಿತಲಿ ಭಾಕ್ರಿ ಮಾಜೆ ಶರಿರ್, ಜಗ್ ಝಿತ್ತೊ ರ್‍ಹಾವ್ಕ್ ಪಾಜೆ ಮನುನ್ ತೆಚ್ಯಾ ಸಾಟ್ನಿ ಮಿಯಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:51
30 ತಿಳಿವುಗಳ ಹೋಲಿಕೆ  

ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.


ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.


ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.


ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.


ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.


ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.


ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.


ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.


“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.


ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಜೀವದಾಯಕ ರೊಟ್ಟಿ ನಾನೇ.


ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ.


ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು