Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:63 - ಕನ್ನಡ ಸತ್ಯವೇದವು C.L. Bible (BSI)

63 ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63 ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

63 ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63 ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ದೆವಾಚೊ ಆತ್ಮೊ ಜಿವ್ ದಿತಾ, ಮಾನ್ಸಾಚ್ಯಾ ತಾಕ್ತಿಚೊ ಕಾಯ್ಬಿ ಫಾಯ್ದೊ ನಾ. ಮಿಯಾ ತುಮ್ಚ್ಯಾ ಕಡೆ ಬೊಲಲ್ಲ್ಯಾ ಹ್ಯಾ ಗೊಸ್ಟಿಯಾ ದೆವಾಚ್ಯಾ ಆತ್ಮೊ ಹೊಲಾ ಹ್ಯೊ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:63
31 ತಿಳಿವುಗಳ ಹೋಲಿಕೆ  

ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.


ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು I ಅವುಗಳಿಂದಲೇ ನನಗಿತ್ತೆ ನವಜೀವನವನು II


ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.


ನಿನ್ನ ನುಡಿ ತರುತ್ತದೆನಗೆ ನವಚೇತನ I ಆಪತ್ಕಾಲದಲಿ ನನಗದೇ ಸಾಂತ್ವನ II


ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.


ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.


ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.


ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.


ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.


“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು